| 1. |
ಬಿಡುದಿನಗಳಿಂದ ಮೈಮರೆವೆಯಿಂದಕೂಡಿರುವ ಕೊಳೆಯ ಕೊಟ್ಟಚ್ಚೀವುಇವಲ್ಲಿ ಕನ್ನಡದ ಕಂಪು ಸೂಸ-ಅಲ್ಲಲ್ಲಿ ಕರಣ ಚಾಚೇವುನಡುನಾಡೆ ಇರಲಿ, ಗಡಿನಾಡೆ ಇರಲಿಕನ್ನಡದ ಕಳೆಯ ಕಚ್ಚೇವುಮರೆತೇವು ಮರವ, ತೆರೆದೇವು ಮನವ, ಎರೆದೇವು ಒಲವ ಹಿರಿ ನೆನಪನರನರವನೆಲ್ಲ ಹುರಿಗೊಳಿಸಿ ಹೊಸೆದು ಹಚ್ಚೇವು ಕನ್ನಡದ ದೀಪplease frame at least five questions in kannada for this |
|
Answer» ಹಚ್ಚೇವು ಕನ್ನಡದ ದೀಪ ಕರುನಾಡದೀಪ ಸಿರಿನುಡಿಯದೀಪ ಒಲವೆತ್ತಿ ತೋರುವಾ ದೀಪ | ಹಚ್ಚೇವು | ಬಹುದಿನಗಳಿಂದ ಮೈಮರೆವೆಯಿಂದ ಕೂಡಿರುವ ಕೊಳೆಯ ಕೊಚ್ಚೇವು ಎಲ್ಲೆಲ್ಲಿ ಕನ್ನಡದ ಕಂಪು ಸೂಸ- ಲಲ್ಲಲ್ಲಿ ಕರಣ ಚಾಚೇವು ನಡು ನಾಡೆ ಇರಲಿ, ಗಡಿನಾಡೆ ಇರಲಿ ಕನ್ನಡದ ಕಳೆಯ ಕೆಚ್ಚೇವು ಮರತೇವು ಮರವ, ತೆರೆದೇವು ಮನವ, ಎರೆದೇವು ಒಲವ-ಹಿರಿ ನೆನಪ ನರನರವನೆಲ್ಲ ಹುರಿಗೊಳಿಸಿ ಹೊಸೆದು ಹಚ್ಚೇವು ಕನ್ನಡದ ದೀಪ ಕಲ್ಪನೆಯ ಕಣ್ಣು ಹರಿವನಕ ಸಾಲು ದೀಪಗಳ ಬೆಳಕ ಬೀರೇವು ಹಚ್ಚಿರುವ ದೀಪದಲಿ ತಾಯ ರೂಪ ಅಚ್ಚಳಿಯದಂತೆ ತೋರೇವು ಒಡಲೊಡಲ ಕೆಚ್ಚಿನಾ ಕಿಡಿಗಳನ್ನು ಗಡಿನಾಡಾಚೆ ತೂರೇವು ಹೊಮ್ಮಿರಲು ಪ್ರೀತಿ ಎಲ್ಲಿಯದು ಭೀತಿ? -ನಾಡೊಲವೆ ನೀತಿ ಹಿಡಿ ನೆನಪ ಮನೆಮನೆಗಳಲ್ಲಿ ಮನಮನಗಳಲ್ಲಿ ಹಚ್ಚೇವು ಕನ್ನಡದ ದೀಪ. ಕರುನಾಡಿನರಿವ ನೆರೆತೀವಿ ಭಾವ- ದಲಿ ಜೀವನಾಡಿ ನುಡಿಸೇವು ತೆರೆತೆರೆದ ಕಣ್ಣಿನಲಿ ನೇಹವೆರೆದು ನವ ಜ್ಯೋತಿಯನ್ನೆ ಮುಡಿಸೇವು ನಮ್ಮನ್ನವುಂಡು ಅನ್ಯಾಯಗೈಯು ವಂಥವರ ಹುಚ್ಚ ಬಿಡಿಸೇವು ಇಹುದೆಮಗೆ ಛಲವು, ಕನ್ನಡರ ಬಲವು ಕನ್ನಡದ ಒಲವು -ಹಿಡಿನೆನವು ನಮ್ಮದೆಯ ಕೆಚ್ಚುನೆಚ್ಚುಗಳನೂಡಿ ಹಚ್ಚೇವು ಕನ್ನಡದ ದೀಪ. ನಮ್ಮವರು ಗಳಿಸಿದಾ ಹೆಸರ ಉಳಿಸ- ಲೆಲ್ಲಾರು ಒಂದುಗೂಡೇವು ನಮ್ಮದೆಯ ಮಿಡಿಯುವೀ ಮಾತಿನಲ್ಲಿ ಮಾತೆಯನು ಪೂಜೆ ಮಾಡೇವು ನಮ್ಮುಸಿರು ತೀಡುವೀ ನಾಡಿನಲ್ಲಿ ಮಾಂಗಲ್ಯಗೀತ ಹಾಡೇವು ತೊರೆದೇವು ಮರುಳ, ಕಡೆದೇವು ಇರುಳ ಪಡೆದೇವು ತಿರುಳ -ಹಿಡಿನೆನಪ ಕರುಳೆಂಬ ಕುಡಿಗೆ ಮಿಂಚನ್ನೆ ಮುಡಿಸಿ ಹಚ್ಚೇವು ಕನ್ನಡದ ದೀಪ. ಸಾಹಿತ್ಯ: ಡಾ. ಡಿ.ಎಸ್. ಕರ್ಕಿ |
|