1.

Kannada swachh barat abiyana dale vidyrtegala patra prabanada​

Answer»

ಭಾರತ ಅಭಿಯಾನ ಗಾಂಧೀಜಿಯವರ ಕಾಲದಲ್ಲೇ ಆರಂಭಗೊಂಡಿದ್ದರೂ, ಅದು ಹೆಚ್ಚು ಪ್ರಚಲಿತಕ್ಕೆ ಬಂದುದು ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು.ಸ್ವಚ್ಛ ಭಾರತ ಅಭಿಯಾನವು ಅಕ್ಟೋಬರ್ ೨ರ ಗಾಂಧಿ ಜಯಂತಿ­ಯಂದು ದೇಶದ ಪ್ರಧಾನಿ ನರೇಂದ್ರ ಮೋದಿ­ಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛ­ಗೊಳಿಸಿ, ಸ್ವಚ್ಛ ಭಾರತ ಅಭಿಯಾನ­ಕ್ಕೆ ಚಾಲನೆ­ ನೀಡುವ ಮೂಲಕ ದೇಶದ ಜನ­ರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವ­­ಜನಿಕ ಪ್ರದೇಶಗಳಲ್ಲಿ ಕೊಳೆ, ಕಸ­ಗಳನ್ನು ನೋಡಿ ತಾವೇನೂ ಮಾಡ­ಲಾ­ಗದೇ ಅವು­ಗಳಿಗೆ ಅನಿವಾರ್ಯವಾಗಿ ಹೊಂದಿ­ಕೊಂಡಂತಿದ್ದ ಬಹ­ಳಷ್ಟು ಜನರಲ್ಲಿ ಆಶಾ­ಭಾವನೆಗಳು ಚಿಗುರೊಡೆದಿವೆ.ಮೋದಿಯವರು ಸಾರ್ವ­ಜನಿಕರಿಗೆ ತಮ್ಮ ಪ್ರದೇಶ­­ಗಳನ್ನು ಸ್ವಚ್ಛವಾಗಿ­ಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್‌ ತೆಂಡೂಲ್ಕರ್‌­ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶ­ವನ್ನು ಸ್ವಚ್ಛ­ಗೊಳಿ­ಸುವುದು ಹಾಗೂ ಇನ್ನಿತ­ರ­ರಿಗೂ ಅದೇ ರೀತಿ ಮಾಡು­ವಂತೆ ಕರೆ ನೀಡುವ ಮೂಲಕ ಅಭಿ­ಯಾನಕ್ಕೆ ಕೈಜೋಡಿಸಲು ಆಹ್ವಾನಿ­ಸಿದರು. ಹೆಚ್ಚಿನವರು ಸಾರ್ವ­ಜನಿಕ­­ವಾಗಿಯೂ ಈ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತ­ಪಡಿ­ಸುತ್ತಿದ್ದಾರೆ. ಸ್ವತಃ ಪ್ರಧಾನಿ­ಯವರ ಒತ್ತಾಸೆ, ಇತರ ಪ್ರಮುಖರ ಹಾಗೂ ಸರ್ಕಾ­ರೇತರ ಸಂಸ್ಥೆ­ಗಳ ಬೆಂಬಲ, ಸಾರ್ವಜನಿಕರ ಸಹ­ಭಾಗಿತ್ವ, ಜಾಲತಾಣ, ಮಾಧ್ಯಮಗಳ ಮೂಲಕ ಸ್ವಚ್ಛ­ತೆಯ ವಿಷಯದ ಕುರಿತ ಪ್ರಚಾರ.



Discussion

No Comment Found